ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ

February 26, 2026
2:38 PM

27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಬಿಸಿಲು ಮತ್ತು ಸೆಖೆಯ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದಲ್ಲಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳು :  ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಸೋಮವಾರಪೇಟೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಗಡಿಭಾಗಗಳಲ್ಲಿ ಕೂಡಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳ ಕಾಲ ಅನಿರೀಕ್ಷಿತ ಮಳೆಯಾಗಿತ್ತು. ಆದರೆ ಇಂದಿನ ಮುನ್ಸೂಚನೆಯ ಪ್ರಕಾರ ಈ ಭಾಗದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಮಳೆಗೆ ಕಾರಣವೇನು? :  ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರದಲ್ಲಿ ಯಾವುದೇ ಪ್ರಮುಖ ಹವಾಮಾನ ವ್ಯವಸ್ಥೆ ಇಲ್ಲದಿದ್ದರೂ, ಹೆಚ್ಚಿದ ತಾಪಮಾನ ಮತ್ತು ವಾತಾವರಣದ ತೇವಾಂಶದಿಂದ ಸ್ಥಳೀಯ ಮೋಡಗಳ ರಚನೆ ನಡೆಯುತ್ತಿದೆ. ಹಿಂದಿನ ವಾಯುಭಾರ ಕುಸಿತದ ಪರಿಣಾಮವಾಗಿ ತೇವಾಂಶ ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ಸಂಜೆ ವೇಳೆಯಲ್ಲಿ ಸ್ಥಳೀಯವಾಗಿ ಮಳೆಯಾಗುತ್ತಿದೆ.

Parts of Coastal Karnataka, Malnad, and Mysuru region are likely to receive light to moderate evening showers due to high temperature and atmospheric moisture. No major weather system is active, but localized cloud formation may trigger rainfall in select areas.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror