Advertisement
ಸುದ್ದಿಗಳು

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

Share

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಳೆಯ ಪ್ರಮಾಣ ಇಳಿಮುಖವಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಸೆ.8 ರಿಂದ 10ರವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯಿದ್ದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳಲ್ಲೂ ಸ್ಥಳೀಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕರಾವಳಿಯಲ್ಲಿ ಸೆ.8–10ರ ನಡುವೆ ಅಲ್ಲಲ್ಲಿ ಮಳೆ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 8 ರಿಂದ 10ರವರೆಗೆ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸದ್ಯದ ಮುನ್ಸೂಚನೆಯಲ್ಲಿ ವ್ಯಾಪಕ ಅಥವಾ ಭಾರಿ ಮಳೆಯ ಸೂಚನೆ ಇಲ್ಲ.

ಮಲೆನಾಡಿನಲ್ಲಿ ಮಳೆ ಸೀಮಿತ :  ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಆದರೂ ಸೆ.8 ರಿಂದ 10ರವರೆಗೆ ಮಲೆನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕುಸಿತ :  ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬೀದರ್ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಈಗಿನ ಮುನ್ಸೂಚನೆಯ ಪ್ರಕಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಅವಧಿಯಲ್ಲಿ ಮಳೆಯ ಸಾಧ್ಯತೆಗಳು ಕ್ರಮೇಣ ಕಡಿಮೆಯಾಗುತ್ತಿವೆ.

ದಕ್ಷಿಣ ಒಳನಾಡಿನಲ್ಲಿ ಸ್ಥಳೀಯ ಮಳೆ ಮುಂದುವರಿಯುವ ಸಾಧ್ಯತೆ : ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಕೂಡ ಇದೆ. ಇತರ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸೀಮಿತವಾಗಿದ್ದರೂ, ಈಗಿನ ಮುನ್ಸೂಚನೆಯ ಪ್ರಕಾರ ಮುಂದಿನ 10 ದಿನಗಳಲ್ಲೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹಿಂಗಾರು ಮಾರುತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ? :  ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಿಂದ ಬೀಸುವ ಗಾಳಿಯು ಪೆಸಿಫಿಕ್ ಮಹಾಸಾಗರದ ಕಡೆಗೆ ನಿರಂತರವಾಗಿ ಚಲಿಸುತ್ತಿರುವ ಹವಾಮಾನ ಪರಿಸ್ಥಿತಿ ಗಮನ ಸೆಳೆಯುತ್ತಿದೆ. ಈ ಗಾಳಿಯ ಸಂಚಾರ ಇದೇ ರೀತಿಯಲ್ಲಿ ಮುಂದುವರಿದರೆ ಹಿಂಗಾರು ಮಾರುತಗಳ ಬೆಳವಣಿಗೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಇದೆ. ಆದರೆ ಇದು ಸದ್ಯದ ಹವಾಮಾನ ಪರಿಸ್ಥಿತಿಯ ಆಧಾರದ ಮೇಲಿನ ಸಾಧ್ಯತೆಯಾಗಿದ್ದು, ಹಿಂಗಾರು ಮಳೆಯ ಅಂತಿಮ ಚಿತ್ರಣಕ್ಕೆ ಮುಂದಿನ ವಾರಗಳಲ್ಲಿನ ವಾತಾವರಣದ ಬೆಳವಣಿಗೆಗಳನ್ನು ಕಾದು ನೋಡಬೇಕಾಗಿದೆ.

ರೈತರಿಗೆ ಏನು ಸೂಚನೆ..?: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಆದರೂ ಸೆ.8–10ರ ನಡುವೆ ಕರಾವಳಿ ಮತ್ತು ಮಲೆನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ಸ್ಥಳೀಯವಾಗಿ ಮಳೆ ಮತ್ತು ಗುಡುಗು ಮುಂದುವರಿಯುವ ಸಾಧ್ಯತೆಯಿರುವುದರಿಂದ ಸ್ಥಳೀಯ ಹವಾಮಾನ ಗಮನಿಸಿ ಕೃಷಿ ಕೆಲಸ ಕೈಗೊಳ್ಳುವುದು ಸೂಕ್ತ.

Rainfall activity is showing signs of weakening across much of Karnataka. Coastal and Malnad regions may receive isolated normal showers between September 8 and 10, while South Interior Karnataka may continue to experience scattered rain, including isolated thunderstorms, over the next 10 days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

4 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

17 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago