ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

September 7, 2026
1:29 PM
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಸೆ.16ರವರೆಗೆ ಅಲ್ಲಲ್ಲಿ ಮಳೆಯ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು ಮಳೆಯ ಸಾಧ್ಯತೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 10ರವರೆಗೆ ಮೋಡ ಹೆಚ್ಚಾಗಲಿದ್ದು, ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಸೆ.16ರವರೆಗೆ ಅಲ್ಲಲ್ಲಿ ಮಳೆಯ ಲಕ್ಷಣಗಳಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಮಳೆಯ ಬಳಿಕ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement

ಕರಾವಳಿಯಲ್ಲಿ ಸೆ.8–10 ಮೋಡ, ಅಲ್ಲಲ್ಲಿ ಮಳೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣವಿದೆ.  ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 8ರಿಂದ 10ರವರೆಗೆ ಮೋಡದ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯಾಗಬಹುದು. ಸದ್ಯದ ಮುನ್ಸೂಚನೆಯಲ್ಲಿ ವ್ಯಾಪಕ ಅಥವಾ ಭಾರಿ ಮಳೆಯ ಸೂಚನೆ ಕಂಡುಬರುತ್ತಿಲ್ಲ.

ಮಲೆನಾಡಿನಲ್ಲಿ ಸೆ.16ರವರೆಗೆ ಮಳೆಯ ಲಕ್ಷಣ :  ಕೊಡಗು ಜಿಲ್ಲೆಯ ಕೇರಳ ಗಡಿಭಾಗದ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ದೀರ್ಘಾವಧಿ ಮುನ್ಸೂಚನೆಯ ಪ್ರಕಾರ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಆದರೆ, ಮಳೆಯ ಪ್ರಮಾಣ ಮತ್ತು ವಿತರಣೆ ದಿನದಿಂದ ದಿನಕ್ಕೆ ಬದಲಾಗುವ ಸಾಧ್ಯತೆಯಿದ್ದು, ಸ್ಥಳೀಯವಾಗಿ ಮಾತ್ರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಎರಡು ದಿನ ಮಳೆ : ಬೆಳಗಾವಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ನಂತರ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ, ಸೆಪ್ಟೆಂಬರ್ 14ರಿಂದ ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು ಮಳೆ ಸಾಧ್ಯತೆ :  ಮೈಸೂರು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯಿದೆ. ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 13 ಮತ್ತು 14ರಂದು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹಿಂಗಾರು ಮಳೆಗೆ ಎಲ್ ನಿನೋ ಪರಿಣಾಮ? : ಎಲ್ ನಿನೋ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವರ್ಷದ ಹಿಂಗಾರು ಮಳೆಯ ಸ್ವರೂಪದ ಬಗ್ಗೆ ಈಗಲೇ ಖಚಿತ ನಿರ್ಧಾರಕ್ಕೆ ಬರುವುದು ಕಷ್ಟವಾಗಿದ್ದು, ಮುಂದಿನ ಹವಾಮಾನ ಬೆಳವಣಿಗೆಗಳನ್ನು ಕಾದು ನೋಡಬೇಕಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಅದರ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅದು ತಮಿಳುನಾಡು ಅಥವಾ ಆಂಧ್ರಪ್ರದೇಶದ ಮೂಲಕ ಭೂಭಾಗ ಪ್ರವೇಶಿಸಿದರೆ, ಅಥವಾ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ವ್ಯವಸ್ಥೆ ರೂಪುಗೊಂಡರೆ, ಹಿಂಗಾರು ಮಾರುತಗಳು ಚುರುಕಾಗಿ ರಾಜ್ಯದ ಒಳನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಬಹುದು. ಹೀಗಾಗಿ ಹಿಂಗಾರು ಮಳೆಯ ಪ್ರಮಾಣವನ್ನು ನಿರ್ಧರಿಸುವಲ್ಲಿ ಮುಂದಿನ ವಾರಗಳಲ್ಲಿ ರೂಪುಗೊಳ್ಳುವ ಸಮುದ್ರದ ಹವಾಮಾನ ವ್ಯವಸ್ಥೆಗಳು ಪ್ರಮುಖವಾಗಲಿವೆ.

ರೈತರಿಗೆ ಸೂಚನೆ :  ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸೀಮಿತವಾಗುವ ಸಾಧ್ಯತೆಯಿದ್ದರೂ, ಸ್ಥಳೀಯವಾಗಿ ತುಂತುರು, ಸಾಮಾನ್ಯ ಅಥವಾ ಸಂಜೆ ಗುಡುಗು ಸಹಿತ ಮಳೆ ಬೀಳಬಹುದು. ಕರಾವಳಿ–ಮಲೆನಾಡಿನಲ್ಲಿ ಸೆ.8–10ರ ಮೋಡ ಮತ್ತು ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೊಯ್ಲು, ಒಣಗಿಸುವಿಕೆ ಹಾಗೂ ಕೃಷಿ ಉತ್ಪನ್ನಗಳ ಸಂಗ್ರಹ ಕಾರ್ಯಗಳನ್ನು ಯೋಜಿಸುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Coastal Karnataka is likely to see increased cloud cover and scattered light to normal rain from September 8–10. Malnad may receive isolated rainfall through September 16, while parts of North Interior Karnataka may get rain over the next two days before drier conditions develop, with another chance of scattered rain from September 14. South Interior Karnataka may see isolated rain on September 13–14.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror