ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

May 3, 2025
6:23 AM
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.  ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ.  ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. 

Advertisement
Advertisement

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.  ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group