Advertisement
MIRROR FOCUS

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

Share

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.  ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ.  ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. 

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.  ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

3 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

4 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

6 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

7 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

14 hours ago