ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಹವಾಮಾನ ಮಾಹಿತಿ ಪಡೆಯಲು “ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಿ – ಇಲ್ಲಿ ಕ್ಲಿಕ್ ಮಾಡಿರಿ..
ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.
ಹವಾಮಾನ ಮಾಹಿತಿ ಪಡೆಯಲು “ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಿ – ಇಲ್ಲಿ ಕ್ಲಿಕ್ ಮಾಡಿರಿ..
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…