ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?

March 22, 2026
3:10 PM
ಕರಾವಳಿ ಮತ್ತು ಮಲೆನಾಡಿನಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದೆ.

2026 ಜೂನ್‌ 23ರ ಬೆಳಿಗ್ಗೆ 8 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ.

ಕರಾವಳಿ ಪ್ರದೇಶ : ಕಾಸರಗೋಡು ಜಿಲ್ಲೆಯಲ್ಲಿ ದಿನದ ವೇಳೆ ಬಿಸಿಲು ಕಂಡುಬರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಕೆಲವೆಡೆ ಮೋಡದ ವಾತಾವರಣ ಉಂಟಾಗಬಹುದು. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮತ್ತು ಸಂಜೆ ವೇಳೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಗುಡುಗು ಸಹ ಇರಬಹುದಾಗಿದೆ.

ಮಲೆನಾಡು ಪ್ರದೇಶ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನಪೂರ್ತಿ ಬಿಸಿಲು ಹಾಗೂ ಸಂಜೆ, ರಾತ್ರಿ ವೇಳೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು:  ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಹ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಾತಾವರಣದ ಸ್ಥಿತಿ :  ಅರಬ್ಬಿ ಸಮುದ್ರದ ಮೇಲೆ ರೂಪಗೊಂಡಿದ್ದ ಪ್ರತ್ಯಾವರ್ತ ಮಾರುತ (Anti-cyclonic circulation) ಶಿಥಿಲಗೊಳ್ಳುತ್ತಿದ್ದು, ಗಾಳಿಯ ಚಲನೆ ಮತ್ತೆ ಭೂ ಪ್ರದೇಶದ ಕಡೆಗೆ ಯಥಾಸ್ಥಿತಿಗೆ ಮರಳುತ್ತಿದೆ. ಇದರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳು ಗೋಚರಿಸುತ್ತಿವೆ.

Weather forecast for Karnataka till 8 AM, June 23 indicates chances of light to normal rain in coastal and Malnad regions during afternoon and evening, with possible thunder in isolated areas. North and South interior districts are likely to experience sunny to partly cloudy conditions with minimal rainfall prospects.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ
ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror