Advertisement
ವೆದರ್ ಮಿರರ್

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

Share

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿದಿದ್ದು, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶ :  ಕಾಸರಗೋಡು ಭಾಗದಲ್ಲಿ ಮೋಡದ ವಾತಾವರಣವಿದ್ದು, ತೇವಾಂಶ ಹೆಚ್ಚಾದರೆ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಸಂಜೆ ವೇಳೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈ ಮಳೆಯು ಏಪ್ರಿಲ್ 4ರವರೆಗೆ ಮುಂದುವರಿಯಲಿದ್ದು, ನಂತರ ಸ್ವಲ್ಪ ಕಡಿಮೆಯಾಗುತ್ತದೆ. ಆದರೆ ಏಪ್ರಿಲ್ 10ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು,  ಸಂಜೆ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ.
ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 5ರಿಂದ ಮಳೆ ಕಡಿಮೆಯಾಗಲಿದೆ, ಏಪ್ರಿಲ್ 10ರಿಂದ ಮತ್ತೆ ಚುರುಕಾಗುವ ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಭಾಗಗಳಲ್ಲಿ ತುಂತುರು ಮಳೆ ಹಾಗೂ ಮೋಡದ ವಾತಾವರಣ ಕಾಣಿಸಬಹುದು.

ಏಪ್ರಿಲ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ದಕ್ಷಿಣ ಒಳನಾಡು :  ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.
ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿಯ ದಿಕ್ಕು ಬದಲಾಗಿದ್ರೆ ಮೈಸೂರು ಭಾಗದಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 10ರಿಂದ ಮತ್ತೆ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ.

ವಿಶೇಷ ಹವಾಮಾನ ಸೂಚನೆ :  ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು ಚುರುಕಾಗುತ್ತಿದ್ದು, ಇದು ಮುಂದುವರಿದರೆ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ.  ಹವಾಮಾನ ವರದಿಗಳ ಪ್ರಕಾರ, ಜೂನ್ ತಿಂಗಳಲ್ಲಿ ಎಲ್‌ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Rainfall activity continues across coastal and Malnad regions of Karnataka until April 4, followed by a brief reduction. Weather models indicate rainfall may intensify again from April 10. El Niño conditions may weaken the upcoming monsoon.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

16 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

23 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago