Advertisement
ವೆದರ್ ಮಿರರ್

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

Share

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿದಿದ್ದು, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶ :  ಕಾಸರಗೋಡು ಭಾಗದಲ್ಲಿ ಮೋಡದ ವಾತಾವರಣವಿದ್ದು, ತೇವಾಂಶ ಹೆಚ್ಚಾದರೆ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಸಂಜೆ ವೇಳೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈ ಮಳೆಯು ಏಪ್ರಿಲ್ 4ರವರೆಗೆ ಮುಂದುವರಿಯಲಿದ್ದು, ನಂತರ ಸ್ವಲ್ಪ ಕಡಿಮೆಯಾಗುತ್ತದೆ. ಆದರೆ ಏಪ್ರಿಲ್ 10ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು,  ಸಂಜೆ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ.
ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 5ರಿಂದ ಮಳೆ ಕಡಿಮೆಯಾಗಲಿದೆ, ಏಪ್ರಿಲ್ 10ರಿಂದ ಮತ್ತೆ ಚುರುಕಾಗುವ ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಭಾಗಗಳಲ್ಲಿ ತುಂತುರು ಮಳೆ ಹಾಗೂ ಮೋಡದ ವಾತಾವರಣ ಕಾಣಿಸಬಹುದು.

ಏಪ್ರಿಲ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ದಕ್ಷಿಣ ಒಳನಾಡು :  ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.
ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿಯ ದಿಕ್ಕು ಬದಲಾಗಿದ್ರೆ ಮೈಸೂರು ಭಾಗದಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 10ರಿಂದ ಮತ್ತೆ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ.

ವಿಶೇಷ ಹವಾಮಾನ ಸೂಚನೆ :  ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು ಚುರುಕಾಗುತ್ತಿದ್ದು, ಇದು ಮುಂದುವರಿದರೆ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ.  ಹವಾಮಾನ ವರದಿಗಳ ಪ್ರಕಾರ, ಜೂನ್ ತಿಂಗಳಲ್ಲಿ ಎಲ್‌ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Rainfall activity continues across coastal and Malnad regions of Karnataka until April 4, followed by a brief reduction. Weather models indicate rainfall may intensify again from April 10. El Niño conditions may weaken the upcoming monsoon.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

5 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

15 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

21 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago