Advertisement
ಸುದ್ದಿಗಳು

ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ

Share

ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಕೆಲವು ದಿನ ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಮೇ 24ರಿಂದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ವೇಳೆ ಮುಂಗಾರು ಮಾರುತಗಳು ಮೇ 30ರ ಸುಮಾರಿಗೆ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಸಂಜೆ ಮಳೆ, ಬಳಿಕ ಇಳಿಮುಖ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಸಂಜೆ ಮತ್ತು ರಾತ್ರಿ ವೇಳೆ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಭಾಗಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯ ಲಕ್ಷಣಗಳಿವೆ.

ಪ್ರಸ್ತುತ ಸ್ಥಿತಿಯಂತೆ ಮೇ 24ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಮೇ 24ರಿಂದ ಮಲೆನಾಡು ಭಾಗಗಳಲ್ಲೂ ಮಳೆ ಇಳಿಮುಖವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಾಧ್ಯತೆ : ಬಾಗಲಕೋಟೆ, ಗದಗ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆಯ ವಾತಾವರಣ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಈ ಭಾಗಗಳಲ್ಲೂ ಮೇ 24ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.

ಮುಂಗಾರು ಚಟುವಟಿಕೆ ಏನಿದೆ?: ದಕ್ಷಿಣ ಸಮುದ್ರ ಭಾಗದಿಂದ ಬೀಸುತ್ತಿರುವ “ಸೋಮಾಲಿ ಜೆಟ್‌ ವೇವ್ಸ್” ಪರಿಣಾಮದಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಮುಂದುವರಿದಿದೆ. ದಕ್ಷಿಣ ಸಮುದ್ರ ಭಾಗದ ತಿರುಗುವಿಕೆ ಆಸ್ಟ್ರೇಲಿಯಾದ ನೈರುತ್ಯ ಕರಾವಳಿಯತ್ತ ಚಲಿಸುತ್ತಿದ್ದಂತೆ ಮುಂಗಾರು ಮಾರುತಗಳು ಚುರುಕಾಗುವ ಸಾಧ್ಯತೆ ಇದೆ.

ಈಗಿನ ಲೆಕ್ಕಾಚಾರದಂತೆ ಮೇ 30ರ ಸುಮಾರಿಗೆ ಮುಂಗಾರು ಕರ್ನಾಟಕ ಪ್ರವೇಶಿಸುವ ನಿರೀಕ್ಷೆ ಇದೆ.

Rainfall activity is likely to continue across many parts of Karnataka till May 24, especially during evenings and nights. Coastal, Malnad, North Interior and South Interior districts may receive scattered thunderstorms. Weather analysts indicate that monsoon winds may enter Karnataka around May 30.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago