ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

March 18, 2026
1:40 PM
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ದಿಕ್ಕು ಸ್ಪಷ್ಟವಾಗಿಲ್ಲದ ಕಾರಣ ಕೆಲವು ಕಡೆ ಆಲಿಕಲ್ಲು ಮಳೆಯೂ ಸಂಭವಿಸುವ ಸಾಧ್ಯತೆ ಇದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ದಿಕ್ಕು ಸ್ಪಷ್ಟವಾಗಿಲ್ಲದ ಕಾರಣ ಕೆಲವು ಕಡೆ ಆಲಿಕಲ್ಲು ಮಳೆಯೂ ದಾಖಲಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಾಣಿಸಿಕೊಂಡಿದ್ದು, ಮಾರ್ಚ್‌ 19ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯ ಪ್ರಕಾರ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ತೀರ ಪ್ರದೇಶಗಳಲ್ಲಿ ಸಂಜೆ ಮಳೆ ಕಡಿಮೆಯಾಗಿದ್ದರೆ ಮುಂಜಾನೆ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಕೆಲ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸೇರಿ) ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

 ಗಾಳಿಯ ವೇಗ ಅತಿ ನಿಧಾನವಾಗಿದ್ದು ಹಾಗೂ ನಿರ್ದಿಷ್ಟ ದಿಕ್ಕು ಇಲ್ಲದ ಕಾರಣ ಕೆಲ ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯ ಘಟನೆಗಳು ಕಂಡು ಬರುತ್ತಿವೆ.

ರಾಜ್ಯದಲ್ಲಿ ಈ ಮಳೆಯ ಚಟುವಟಿಕೆಗಳು ಮಾರ್ಚ್‌ 20ರವರೆಗೆ ಮುಂದುವರಿಯುವ ಲಕ್ಷಣಗಳಿದ್ದು, ಬಳಿಕ ಮಾರ್ಚ್‌ 25 ಅಥವಾ 27ರವರೆಗೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms with rain are likely across most districts of Karnataka, especially during evening and night hours. The rainfall activity may continue until March 20 statewide, while coastal districts like Dakshina Kannada, Udupi and Kodagu region may receive intermittent rains until March 25–27.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror