Advertisement
ಸುದ್ದಿಗಳು

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

Share

ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಭಾಗ :   ಕರ್ನಾಟಕ ಕರಾವಳಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಅವಧಿ ಮೋಡ ಹಾಗೂ ಹೆಚ್ಚು ತಾಪಮಾನ ಕಂಡುಬರುವ ಸಾಧ್ಯತೆ ಇದ್ದು, ಮಳೆಯ ಸಾಧ್ಯತೆ ಕಡಿಮೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಾದಲ್ಲಿ ತುಂತುರು ಮಳೆಯ ಸಂಭವ ಇದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಕೂಡ ಇದೆ.  ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5ರವರೆಗೆ ಮಳೆಯ ನಿರೀಕ್ಷೆ ಇದೆ.

ಮಲೆನಾಡು ಭಾಗ : ಮಲೆನಾಡು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಹ ಇದೇ ರೀತಿಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಉತ್ತರ ಒಳನಾಡು ಕರ್ನಾಟಕ , ಮೋಡದ ವಾತಾವರಣ ಇದ್ದರೂ ಮಳೆಯ ಪ್ರಮಾಣ ಕಡಿಮೆ.
ಮಾರ್ಚ್ 30ರಿಂದ ಕೆಲವೆಡೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಕರ್ನಾಟಕ,  ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಕಾರಣ : ಬಂಗಾಳಕೊಲ್ಲಿಯಲ್ಲಿ ಉಂಟಾದ ಪ್ರತ್ಯಾವರ್ತ ಮಾರುತ ದುರ್ಬಲವಾಗುತ್ತಿದೆಯಾದರೂ ಅದರ ಪ್ರಭಾವ ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಸೂಚನೆಗಳಿವೆ.

Karnataka is expected to witness scattered thunder showers across coastal, Malnad, and southern interior regions until early April. Coastal districts may receive intermittent rainfall till April 5 due to the weakening anti-cyclonic circulation over the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

1 hour ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago