Advertisement
ಸುದ್ದಿಗಳು

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

Share

ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಭಾಗ :   ಕರ್ನಾಟಕ ಕರಾವಳಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಅವಧಿ ಮೋಡ ಹಾಗೂ ಹೆಚ್ಚು ತಾಪಮಾನ ಕಂಡುಬರುವ ಸಾಧ್ಯತೆ ಇದ್ದು, ಮಳೆಯ ಸಾಧ್ಯತೆ ಕಡಿಮೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಾದಲ್ಲಿ ತುಂತುರು ಮಳೆಯ ಸಂಭವ ಇದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಕೂಡ ಇದೆ.  ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5ರವರೆಗೆ ಮಳೆಯ ನಿರೀಕ್ಷೆ ಇದೆ.

ಮಲೆನಾಡು ಭಾಗ : ಮಲೆನಾಡು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಹ ಇದೇ ರೀತಿಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಉತ್ತರ ಒಳನಾಡು ಕರ್ನಾಟಕ , ಮೋಡದ ವಾತಾವರಣ ಇದ್ದರೂ ಮಳೆಯ ಪ್ರಮಾಣ ಕಡಿಮೆ.
ಮಾರ್ಚ್ 30ರಿಂದ ಕೆಲವೆಡೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಕರ್ನಾಟಕ,  ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಕಾರಣ : ಬಂಗಾಳಕೊಲ್ಲಿಯಲ್ಲಿ ಉಂಟಾದ ಪ್ರತ್ಯಾವರ್ತ ಮಾರುತ ದುರ್ಬಲವಾಗುತ್ತಿದೆಯಾದರೂ ಅದರ ಪ್ರಭಾವ ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಸೂಚನೆಗಳಿವೆ.

Karnataka is expected to witness scattered thunder showers across coastal, Malnad, and southern interior regions until early April. Coastal districts may receive intermittent rainfall till April 5 due to the weakening anti-cyclonic circulation over the Bay of Bengal.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

6 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

7 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

9 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

21 hours ago