Advertisement
ಸುದ್ದಿಗಳು

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

Share

ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಭಾಗ :   ಕರ್ನಾಟಕ ಕರಾವಳಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಅವಧಿ ಮೋಡ ಹಾಗೂ ಹೆಚ್ಚು ತಾಪಮಾನ ಕಂಡುಬರುವ ಸಾಧ್ಯತೆ ಇದ್ದು, ಮಳೆಯ ಸಾಧ್ಯತೆ ಕಡಿಮೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement

ಉಳಿದ ಪ್ರದೇಶಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಾದಲ್ಲಿ ತುಂತುರು ಮಳೆಯ ಸಂಭವ ಇದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಕೂಡ ಇದೆ.  ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5ರವರೆಗೆ ಮಳೆಯ ನಿರೀಕ್ಷೆ ಇದೆ.

ಮಲೆನಾಡು ಭಾಗ : ಮಲೆನಾಡು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಹ ಇದೇ ರೀತಿಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

Advertisement

ಉತ್ತರ ಒಳನಾಡು :  ಉತ್ತರ ಒಳನಾಡು ಕರ್ನಾಟಕ , ಮೋಡದ ವಾತಾವರಣ ಇದ್ದರೂ ಮಳೆಯ ಪ್ರಮಾಣ ಕಡಿಮೆ.
ಮಾರ್ಚ್ 30ರಿಂದ ಕೆಲವೆಡೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಕರ್ನಾಟಕ,  ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ಹವಾಮಾನ ಕಾರಣ : ಬಂಗಾಳಕೊಲ್ಲಿಯಲ್ಲಿ ಉಂಟಾದ ಪ್ರತ್ಯಾವರ್ತ ಮಾರುತ ದುರ್ಬಲವಾಗುತ್ತಿದೆಯಾದರೂ ಅದರ ಪ್ರಭಾವ ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಸೂಚನೆಗಳಿವೆ.

Karnataka is expected to witness scattered thunder showers across coastal, Malnad, and southern interior regions until early April. Coastal districts may receive intermittent rainfall till April 5 due to the weakening anti-cyclonic circulation over the Bay of Bengal.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

10 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

11 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

23 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago