Advertisement
ವೆದರ್ ಮಿರರ್

ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?

Share

ರಾಜ್ಯ ಹವಾಮಾನ ಮುನ್ಸೂಚನೆ (21.03.2026 ಬೆಳಿಗ್ಗೆ 8 ಗಂಟೆವರೆಗೆ): ಕರ್ನಾಟಕದಲ್ಲಿ ಸಧ್ಯಕ್ಕೆ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಸೀಮಿತ ಪ್ರದೇಶಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆ ಇದೆ.

ಕರಾವಳಿ ಭಾಗ :  ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಮೋಡದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಸಧ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್‌ 24ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಮತ್ತೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮಲೆನಾಡು ಭಾಗ:  ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೆಲವು ಪ್ರದೇಶಗಳಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಜೊತೆಗೆ ಸಂಜೆ–ರಾತ್ರಿ ಮೋಡದ ಆವರಣೆ ಕಾಣಿಸಬಹುದು. ಮಾರ್ಚ್‌ 23ರಿಂದ ಮಲೆನಾಡಿನ ಕರಾವಳಿ ಅಂಚಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಆರಂಭವಾಗುವ ಸೂಚನೆಗಳಿವೆ.

ಉತ್ತರ ಒಳನಾಡು :  ಬೀದರ್ ಜಿಲ್ಲೆಯ ಕೆಲವು ಕಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮಾತ್ರ ಕಂಡುಬರುವ ಲಕ್ಷಣ. ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.

ದಕ್ಷಿಣ ಒಳನಾಡು:  ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಮೋಡದ ವಾತಾವರಣ ಮುಂದುವರಿಯಲಿದೆ.
ಸಧ್ಯಕ್ಕೆ ಮಳೆಯ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಮಾರ್ಚ್‌ 24ರಿಂದ ಮೋಡದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಹಿನ್ನೆಲೆ :  ಬಂಗಾಳಕೊಲ್ಲಿಯ ಪ್ರತ್ಯಾವರ್ತ ಮಾರುತ (Anti-cyclonic circulation) ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ಪ್ರತ್ಯಾವರ್ತ ಮಾರುತ ಮುಂದುವರಿದಿರುವ ಪರಿಣಾಮ ಗಾಳಿಯ ಭೂಪ್ರವೇಶ ಪ್ರಕ್ರಿಯೆ ದುರ್ಬಲಗೊಂಡಿದೆ. ಇದರಿಂದ ಮಳೆಯ ಚಟುವಟಿಕೆ ಕಡಿಮೆಯಾಗಿದೆ.

Rain activity has weakened across Karnataka due to weakening anti-cyclonic circulation over the Bay of Bengal, while Arabian Sea circulation continues. Most regions will experience sunny to partly cloudy conditions, with light showers likely in limited coastal and Malnad pockets, and a possible revival of rain from March 23–24.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

4 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

5 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

5 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

16 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

20 hours ago