Weather Mirror | 09-11-2023 | ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚಿನ ಮಳೆ | ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣ |

November 9, 2023
12:07 PM
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.

10.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ ಶಿವಮೊಗ್ಗ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ನವೆಂಬರ್ 10 ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group