15.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಲಾರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಬಂಗಾಳಕೊಲ್ಲಿಯಲ್ಲಿ ನವೆಂಬರ್ 15ರಂದು ಉಂಟಾಗುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಪೂರ್ವ ಕರಾವಳಿಯ ಸಮೀಪ ಉತ್ತರಕ್ಕೆ ಚಲಿಸಿ ನವೆಂಬರ್ 18ರಂದು ಪಶ್ಚಿಮ ಬಂಗಾಳ ಹಾಗೂ ಬಂಗ್ಲಾದೇಶ ಕರಾವಳಿಗೆ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ನವೆಂಬರ್ 15 ರಿಂದ 2 ಅಥವಾ 3 ದಿನಗಳ ಕಾಲ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…