Weather Mirror | 15-11-2023 | ಒಣ ಹವೆ – ಬಿಸಿಲಿನ ವಾತಾವರಣ | ನ.20 ರ ನಂತರ ಮಳೆ ಇದೆ ಏಕೆ…? |

November 15, 2023
3:30 PM
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

16.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಭಾಗಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ವಾಯುಭಾರ ಕುಸಿತವು ನವೆಂಬರ್ 17 ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಇದರ ಜೊತೆಗೆ ನವೆಂಬರ್ 18ರಂದು ಅಂಡಮಾನ್ ಕರಾವಳಿಯಲ್ಲಿ ಪ್ರಭಲವಾದ ವಾಯುಭಾರ ಕುಸಿತ ಉಂಟಾಗಲಿದ್ದು, ನವೆಂಬರ್ 20ರ ಅಂದಾಜು ತಮಿಳುನಾಡು, ಆಂಧ್ರಾ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror