18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶ ಕರಾವಳಿಗೆ ತಲುಪಿದ್ದು, ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಆಂಧ್ರಾ ಕರಾವಳಿ ಬಳಿ ನವೆಂಬರ್ 19ರಂದು ಉಂಟಾಗಲಿದ್ದ ವಾಯುಭಾರ ಕುಸಿತವು ನವೆಂಬರ್ 22 ಕ್ಕೆ ಮುಂದೂಡಲ್ಪಟ್ಟಿದ್ದು ಅಷ್ಟೇನು ಪ್ರಭಲವಾಗಿರುವ ಸಾಧ್ಯತೆ ಕಾಣುತ್ತಿಲ್ಲ.
ಪರಿಣಾಮವಾಗಿ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 19 ರಿಂದ 22ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕರಾವಳಿ ಮೋಡ ಮಾತ್ರ ಇರಬಹುದು. ಮಧ್ಯ ಹಾಗೂ ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…