ವೆದರ್ ಮಿರರ್

#WeatherMirror | ಕರಾವಳಿ ತೀರ ಭಾಗಗಳಲ್ಲಿ ಮಳೆ ಸಾಧ್ಯತೆ | ಉತ್ತರ ಕರ್ನಾಟದಲ್ಲಿ ಇನ್ನೂ ಚುರುಕುಗೊಳ್ಳದ ಮುಂಗಾರು | ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಕೆ ? |

Share

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಈಗಿನ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಬೀಸುತ್ತಿರುವ ಮಳೆಯೂ ಜೂನ್ 27ರ ನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ನಂತರ ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ . ಒಟ್ಟಿನಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜೂನ್ ತಿಂಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರ ಕೊರತೆಯಾಗುವ ಸಾಧ್ಯತೆ ಇದೆ.

ಕಳೆದ ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹಗುರ ಮಳೆಯಾಗಿದೆ.  ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ ಕೊನೆಯ ವಾರ ಬಂದರೂ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಬಿತ್ತನೆ ಮಾಡಿದವರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಬೆಂಗಳೂರು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಎರಡು ದಿನಗಳಿಂದ ಕೆಲವು ಕಡೆ ಮಳೆಯಾಗಿದ್ದು, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂಗಾರು ಇಲ್ಲದೇ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.  ಹಾಸನದಲ್ಲಿ ಮತ್ತೆ ಮಳೆ ಶುರುವಾಗಿದ್ದು ಜನರು ಪರದಾಡಿದರು.  ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದ್ದು ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಆದರೆ ಕೆಲ ಭಾಗಗಳಲ್ಲಿ ಮಳೆ ಬಾರದ ಹಿನ್ನೆಲೆ ಬಿತ್ತನೆ ಮಾಡಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬುಧವಾರ ಉತ್ತಮ ಮಳೆಯಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ 30 ಮಿಮೀ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

4 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

21 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago