02.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಈಗಿನ ವಾಯುಭಾರ ಕುಸಿತದ ಪರಿಣಾಮದಿಂದ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದ ನಾಳೆ, ಡಿಸೆಂಬರ್ 2ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490