ವೆದರ್ ಮಿರರ್

Weather Mirror | 01-12-2023 | ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಬಹುತೇಕ ಕಡೆಗಳಲ್ಲಿ ಒಣಹವೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

02.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಈಗಿನ ವಾಯುಭಾರ ಕುಸಿತದ ಪರಿಣಾಮದಿಂದ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದ ನಾಳೆ, ಡಿಸೆಂಬರ್ 2ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

3 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

3 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

4 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

4 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

4 hours ago