18.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಒಂದೆರಡು ತುಂತುರು ಮಳೆಯ ಸಾಧ್ಯತೆಯೂ ಇದೆ (ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಇರಬಹುದು). ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ.
ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅರಬ್ಬಿ ಸಮುದ್ರದಲ್ಲಿನ ಗಾಳಿಯ ಅಸಮರ್ಪಕ ಚಲನೆಯಿಂದಾಗಿ ಚಳಿಯ ವಾತಾವರಣವು ಕಡಿಮೆಯಾಗಿ ಹಗುರ ಮೋಡದ ವಾತಾವರಣ ನಿರ್ಮಾಣವಾಗಿದೆ. ಈ ಪರಿಸ್ಥಿತಿಯು ಜನವರಿ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…