18.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸದ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಫೆಬ್ರವರಿ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೂ ಫೆಬ್ರವರಿ 22ರ ನಂತರ ಸರಿಯಾದ ಮಾಹಿತಿ ಸಿಗಬಹುದು.
ಫೆಬ್ರವರಿ 17ರಿಂದ ಉತ್ತರ ಭಾರತದ ಜಮ್ಮು ಕಾಶ್ಮೀರದಿಂದ ಆರಂಭವಾಗಿ ಹಿಮಾಚಲ ಪ್ರದೇಶ, ದೆಹಲಿ, ಪಂಜಾಬ್, ಹರಿಯಾಣ, ಉತ್ತರಾಖಂಡ, ನೇಪಾಳ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಉತ್ತರ – ಈಶಾನ್ಯ ರಾಜ್ಯಗಳ ತನಕವೂ ಅಲ್ಲಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಇದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…