Advertisement
ವೆದರ್ ಮಿರರ್

ಹವಾಮಾನ ವರದಿ | 27-05-2024 | ಸಾಮಾನ್ಯ ಮಳೆಯ ಲಕ್ಷಣ | ಬಾಂಗ್ಲಾದೇಶಕ್ಕೆ ಅಪ್ಪಳಿಸಿದ ರೇಮಲ್ ಚಂಡಮಾರುತ | ಜೂ.1 ರಿಂದ ಮುಂಗಾರು ಆಗಮನದ ನಿರೀಕ್ಷೆ |

Share

28.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಧರ್ಮಸ್ಥಳ, ಚಾರ್ಮಾಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕುದುರೆಮುಖ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ, ಚಿತ್ರದುರ್ಗ, ದಾವಣಗೆರೆ, ಗದಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರೇಮಲ್ ಚಂಡಮಾರುತವು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರತದ ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಹಾನಿ ಮಾಡುವ ಸಾಧ್ಯತೆ ಇದೆ. ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ ಸಿಗಬಹುದು. ಆದರೂ ದಿನಕ್ಕೊಂದರಂತೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

12 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

23 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

23 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago