Advertisement
ಸುದ್ದಿಗಳು

ಹವಾಮಾನ ವರದಿ | 29-10-2024 | ಸದ್ಯ ಮಳೆಯ ಸಾಧ್ಯತೆ ಕಡಿಮೆಯಾಗಿದೆ | ನವೆಂಬರ್‌ನಲ್ಲಿ ಕೆಲವು ಕಡೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ |

Share

30.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ  ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಅಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನ ಮಳೆಯು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಉಂಟಾಗಿದ್ದರೆ, ಒಳನಾಡಿನಲ್ಲಿ ಹಿಂಗಾರು ಮಳೆ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago