ಹವಾಮಾನ ವರದಿ | 30-10-2024 | ಸದ್ಯ ಬಿಸಿಲು-ಅಲ್ಲಲ್ಲಿ ಮೋಡ | ಅ.31 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

October 30, 2024
2:30 PM

31.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 31ರಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, ನವೆಂಬರ್ 2ರಿಂದ ಕರಾವಳಿಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ನವೆಂಬರ್ 4ರ ತನಕ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ನವೆಂಬರ್ 2 ರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದು, ನವೆಂಬರ್ 4 ರ ತನಕ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಮುನ್ಸೂಚನೆ ಇದ್ದರೂ ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror