02.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಇರಬಹುದು.
ಈಗಿನ ಈ ಮಳೆಯ ವಾತಾವರಣವು ನವೆಂಬರ್ 8ರ ತನಕ ಮುಂದುವರಿಯುವ ಲಕ್ಷಣಗಳಿವೆ.
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…