Advertisement
ವೆದರ್ ಮಿರರ್

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

Share

ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ನಡುವೆ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, 18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಸಹಿತ ಮಳೆಯ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ ಅಂತ್ಯದವರೆಗೂ ಮಳೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.

ಕರಾವಳಿ ಭಾಗ :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗ್ಗಿನಿಂದ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ ನಂತರ ಮೋಡ ಕವಿಯುವ ಸಾಧ್ಯತೆ ಇದೆ. ಸಂಜೆ ವೇಳೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದರೆ ಕಾಸರಗೋಡು ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ-ಧಾರವಾಡ ಗಡಿಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಗುಡುಗು ಮಳೆಯ ಲಕ್ಷಣಗಳಿವೆ. ಈ ರೀತಿಯ ಮಳೆ ಚಟುವಟಿಕೆ ಮಾರ್ಚ್ 25ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

Advertisement

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ.  ಮಲೆನಾಡು ಪ್ರದೇಶಗಳಲ್ಲೂ ಮಾರ್ಚ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು-ಸಹಿತ ಮಳೆಯ ಸಾಧ್ಯತೆ ಇದೆ.  ಗಾಳಿಯ ತೀವ್ರತೆ ಹೆಚ್ಚಿದರೆ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳವರೆಗೂ ಮಳೆ ವ್ಯಾಪಿಸಬಹುದು. ಉತ್ತರ ಒಳನಾಡಿನಲ್ಲಿ ಈ ಮಳೆ ಚಟುವಟಿಕೆ ಮಾರ್ಚ್ 29ರವರೆಗೆ ಮುಂದುವರಿಯುವ ಸೂಚನೆಗಳಿವೆ.

Advertisement

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ-ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನಲ್ಲಿ ಮಳೆಯು ಮಾರ್ಚ್ 20ರವರೆಗೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಕರಿಗೆ ಸೂಚನೆ : ಬೇಸಿಗೆ ಆರಂಭದಲ್ಲೇ ಈ ರೀತಿಯ ಗುಡುಗು-ಮಳೆ ಸಂಭವಿಸುವುದರಿಂದ ತೋಟಗಾರಿಕೆ ಬೆಳೆಗಳು, ಅಡಿಕೆ-ಮೆಣಸು ತೋಟಗಳು ಹಾಗೂ ಕೊಯ್ಲಿಗೆ ಬಂದಿರುವ ಬೆಳೆಗಳಿಗೆ ಮುನ್ನೆಚ್ಚರಿಕೆ ಅಗತ್ಯ. ಗಾಳಿಯೊಂದಿಗೆ ಮಳೆ ಬಂದಲ್ಲಿ ಕೊಂಬೆ ಮುರಿತ ಹಾಗೂ ಅಡಿಕೆ ಉದುರುವ ಸಮಸ್ಯೆ ಉಂಟಾಗಬಹುದು.

Advertisement

Thunderstorm activity is likely across many parts of Karnataka till late March. Coastal and Malnad regions may receive intermittent evening rains till March 25, while North Interior Karnataka could see rain activity till March 29. Farmers are advised to stay alert due to possible gusty winds and localized heavy showers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

17 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

17 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago