Advertisement
ವೆದರ್ ಮಿರರ್

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

Share

ಮಾರ್ಚ್‌ 13ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಹಗಲು ವೇಳೆಯಲ್ಲಿ ಅಧಿಕ ತಾಪಮಾನ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು : ಕರಾವಳಿ ಭಾಗಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗಲು ವೇಳೆ ಬಿಸಿಲು ಮತ್ತು ಉಷ್ಣತೆಯ ಪ್ರಮಾಣ ಹೆಚ್ಚಿರಲಿದೆ. ಆದರೆ ಸಂಜೆ ಹಾಗೂ ರಾತ್ರಿ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು.

ಮಲೆನಾಡು ಜಿಲ್ಲೆಗಳು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲಿನ ತಾಪಮಾನ ಅನುಭವವಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಉತ್ತರ ಹಾಗೂ ದಕ್ಷಿಣ ಒಳನಾಡು : ಉತ್ತರ ಒಳನಾಡು ಮತ್ತು ಹೆಚ್ಚಿನ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ತಾಪಮಾನ ಮುಂದುವರಿಯಲಿದ್ದು, ಕೆಲವೆಡೆ ಸಣ್ಣ ಪ್ರಮಾಣದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಮಾರ್ಚ್‌ 14–15ರಿಂದ ಮಳೆ ಸಾಧ್ಯತೆ :  ಮಧ್ಯಮ ಸ್ತರದಲ್ಲಿ ಅಧಿಕ ತಾಪಮಾನದ ಪರಿಚಲನೆ (ಆಂಟಿ ಸೈಕ್ಲೋನಿಕ್ ಸರ್ಕ್ಯುಲೇಶನ್‌) ಮುಂದುವರಿದಿದ್ದು, ಮಾರ್ಚ್‌ 14ರ ವೇಳೆಗೆ ಇದು ವಿಸ್ತಾರಗೊಂಡು ಬಂಗಾಳ ಕೊಲ್ಲಿಯ ಮೂಲಕ ಗಾಳಿಯ ಚಲನೆ ಹೆಚ್ಚಾಗುವ ಸೂಚನೆಗಳಿವೆ. ಇದರ ಪರಿಣಾಮವಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾರ್ಚ್‌ 14 ಅಥವಾ 15ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is likely to continue experiencing higher-than-normal daytime temperatures on March 13, especially across coastal, Malnad, and interior regions. However, an anti-cyclonic circulation pattern may weaken by March 14, allowing stronger winds from the Bay of Bengal, which could trigger thunderstorms and rainfall across many parts of the state from March 14 or 15.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

3 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

7 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

15 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

17 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

18 hours ago