ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

May 1, 2023
9:18 AM

ರಾಜ್ಯದಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಿದೆ. ಏಪ್ರಿಲ್ 29ರಂದು ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಭಾಗಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.

ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ಸ್ವಲ್ಪ ತಂಪು ನೀಡಿದೆ. ರಾಯಚೂರಿನಲ್ಲಿ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ಭಾಗಗಳಲ್ಲಿ 40.5 ಮಿಲಿ ಮೀಟರ್ ಮಳೆಯಾಗಿದೆ. ಮಾತ್ರವಲ್ಲದೆ ಭಾಗಮಂಡಲ, ಶೃಂಗೇರಿ, ಶಿವಮೊಗ್ಗ, ಬಾಳೆಹೊನ್ನೂರು, ತುಮಕೂರು, ದೇವರ ಹಿಪ್ಪರಗಿ, ಮುದಗಲ್, ಕೆಂಭಾವಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹಲವು ಭಾಗಗಳಲ್ಲಿ ಮಳೆಯಾಗಿದೆ. ಭಾನುವಾರ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದ, ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಸಂಜೆ ತುಮಕೂರು ಸುತ್ತಮುತ್ತಲಿನ ಹಲವು ಭಾಗಗಳಲ್ಲಿ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

ತೀವ್ರ ತಾಪಮಾನದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆ ತಂಪೆರದಿದೆ. ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿನಿಂದ ಜನರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿತ್ತು. ಕೃಷಿ ವಲಯದ ಮೇಲೂ ತೀವ್ರ ಬಿಸಿಲು ಕೆಟ್ಟ ಪರಿಣಾಮ ಬೀರಿತ್ತು, ಹಲವು ಭಾಗಗಳಲ್ಲಿ ತೀವ್ರ ಬಿಸಿಲಿಗೆ ಬೆಳೆಗಳು ಒಣಗಿದ್ದವು, ಸದ್ಯ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ತಾಪಮಾನವನ್ನು ಕಡಿಮೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror