ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

May 1, 2023
9:18 AM

ರಾಜ್ಯದಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಿದೆ. ಏಪ್ರಿಲ್ 29ರಂದು ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಭಾಗಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.

Advertisement

ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ಸ್ವಲ್ಪ ತಂಪು ನೀಡಿದೆ. ರಾಯಚೂರಿನಲ್ಲಿ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ಭಾಗಗಳಲ್ಲಿ 40.5 ಮಿಲಿ ಮೀಟರ್ ಮಳೆಯಾಗಿದೆ. ಮಾತ್ರವಲ್ಲದೆ ಭಾಗಮಂಡಲ, ಶೃಂಗೇರಿ, ಶಿವಮೊಗ್ಗ, ಬಾಳೆಹೊನ್ನೂರು, ತುಮಕೂರು, ದೇವರ ಹಿಪ್ಪರಗಿ, ಮುದಗಲ್, ಕೆಂಭಾವಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹಲವು ಭಾಗಗಳಲ್ಲಿ ಮಳೆಯಾಗಿದೆ. ಭಾನುವಾರ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದ, ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಸಂಜೆ ತುಮಕೂರು ಸುತ್ತಮುತ್ತಲಿನ ಹಲವು ಭಾಗಗಳಲ್ಲಿ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

Advertisement

ತೀವ್ರ ತಾಪಮಾನದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆ ತಂಪೆರದಿದೆ. ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿನಿಂದ ಜನರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿತ್ತು. ಕೃಷಿ ವಲಯದ ಮೇಲೂ ತೀವ್ರ ಬಿಸಿಲು ಕೆಟ್ಟ ಪರಿಣಾಮ ಬೀರಿತ್ತು, ಹಲವು ಭಾಗಗಳಲ್ಲಿ ತೀವ್ರ ಬಿಸಿಲಿಗೆ ಬೆಳೆಗಳು ಒಣಗಿದ್ದವು, ಸದ್ಯ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ತಾಪಮಾನವನ್ನು ಕಡಿಮೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror