ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳ ಕಾಲ ಬಿಸಿ ಗಾಳಿ ಹಾಗೂ ತೇವಾಂಶದ ಪರಿಸ್ಥಿತಿ ಇರಲಿದೆ ಎಂದು ಎಚ್ಚರಿಸಿದೆ.
IMD ಮುನ್ಸೂಚನೆಯ ಪ್ರಕಾರ,ಬಿಸಿ ಗಾಳಿ ಹಾಗೂ ತೇವಾಂಶದ ಪರಿಸ್ಥಿತಿ ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರ ಮಳೆ ಸಾಧ್ಯತೆ ಇದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯೊಂದಿಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಇದಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.
- ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ.
- ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬೇಡಿ.
- ರೈತರು ಹೊಲದ ಕೆಲಸ ಮಾಡುವಾಗ ಹವಾಮಾನ ಮುನ್ಸೂಚನೆ ಗಮನಿಸಬೇಕು.
- ಮೀನುಗಾರರು ಮತ್ತು ಸಾರ್ವಜನಿಕರು ಸ್ಥಳೀಯ ಆಡಳಿತ ಹಾಗೂ IMD ಸೂಚನೆಗಳನ್ನು ಪಾಲಿಸಬೇಕು.
The India Meteorological Department (IMD) has issued a Yellow Alert for parts of Coastal, North Interior, and South Interior Karnataka, warning of strong winds and isolated rainfall. People are advised to avoid unnecessary travel and follow weather advisories.

