ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್ರಾಜ್, ಡಾ.ಎಚ್ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.
2021 ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್ ಜಿ ಶ್ರೀಧರ್ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್ರಾಜ್ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್ ಭಟ್ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್ ಅವರ ನಿತ್ಯಪುಷ್ಪ ಮತ್ತು ಗೂಗಲ್ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…