ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್ರಾಜ್, ಡಾ.ಎಚ್ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.
2021 ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್ ಜಿ ಶ್ರೀಧರ್ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್ರಾಜ್ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್ ಭಟ್ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್ ಅವರ ನಿತ್ಯಪುಷ್ಪ ಮತ್ತು ಗೂಗಲ್ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…