ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್ರಾಜ್, ಡಾ.ಎಚ್ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.
2021 ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್ ಜಿ ಶ್ರೀಧರ್ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್ರಾಜ್ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್ ಭಟ್ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್ ಅವರ ನಿತ್ಯಪುಷ್ಪ ಮತ್ತು ಗೂಗಲ್ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…