ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

June 30, 2026
10:39 PM
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1 (ಬುಧವಾರ) ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.  ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ಮುಂದುವರಿದ ಭಾರೀ ಮಳೆಯ ಸಾಧ್ಯತೆಯನ್ನು ಪರಿಗಣಿಸಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಮಳೆಯ ಕಾರಣದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದು  ವಸತಿ (ರೆಸಿಡೆನ್ಶಿಯಲ್) ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಅವುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೇರಳದ ಉತ್ತರ ಭಾಗ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವು ಪ್ರದೇಶಗಳಿಗೆ ಮಳೆ ಎಚ್ಚರಿಕೆ ನೀಡುತ್ತಿದೆ. ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವುದರಿಂದ ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರವಾಸಿಗರು ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿದೆ.

Kasaragod district in Kerala has declared a holiday for all educational institutions on July 1 as a precautionary measure following an Orange Alert for heavy rainfall issued by the India Meteorological Department. However, residential schools, scheduled university/public examinations, and interviews will function as planned.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror