ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ | ಗಂಗೆಯಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಗಂಗಾರತಿಯ ವೈಭವ |

December 13, 2021
8:40 PM

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಸುಮಾರು  5,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುವ  ಪ್ರಧಾನಮಂತ್ರಿಯವರ ಕನಸಿನ ಯೋಜನೆ ಇದಾಗಿದೆ. ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯ  ಮತ್ತು ಗಂಗಾ ನದಿಯ ಉದ್ದಕ್ಕೂ ಇರುವ ಘಾಟ್‌ಗಳನ್ನು ಈ ಯೋಜನೆ ಸಂಪರ್ಕಿಸುತ್ತದೆ.

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭದಲ್ಲಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿ ರುದ್ರಾಕ್ಷಿ ಹಿಡಿದು  ಜಪ  ಮಾಡಿ ಸೂರ್ಯದೇವನಿಗೆ ಅರ್ಘ್ಯ ಸಮರ್ಪಿಸಿದರು. ನಂತರ ವಾರಣಾಸಿಯ ಕಾಲಭೈರವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕಾಲಭೈರವನಿಗೆ ಆರತಿ ಬೆಳಗಿದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕ್ಷೀರಾಭಿಷೇಕ ಮಾಡಿ ಮಹಾಮಂಗಳಾರತಿ ಬೆಳಗಿದರು. ಸಂಜೆ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ದೇಶದ ಪುಣ್ಯಕ್ಷೇತ್ರ ಕಾಶಿ ವಿಶ್ವನಾಥ ಮಂದಿರಕ್ಕೆ ಕಾಯಕಲ್ಪ ನೀಡಬೇಕು ಎಂಬ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾಗಿತ್ತು. ಆಧ್ಯಾತ್ಮಿಕ ಕೇಂದ್ರದ ಕಳೆದುಹೋದ ವೈಭವವನ್ನು ಮರುಸ್ಥಾಪಿಸುವ ಉದ್ದೇಶದಿಂದ 2019 ರ ಮಾರ್ಚ್‌ನಲ್ಲಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ  ಈ ಯೋಜನೆಯನ್ನು ಪ್ರಾರಂಭಿಸಿದರು. ಹೀಗಾಗಿ ಸುಮಾರು 339 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ರೂಪಿಸಿದ್ದರು. ಒಟ್ಟು 800 ಕೋಟಿ ವೆಚ್ಚದ ಈ ಯೋಜನೆಯು ಪುರಾತನ ದೇವಾಲಯವನ್ನು ಗಂಗಾನದಿಯ ದಡಕ್ಕೆ ಸಂಪರ್ಕಿಸುತ್ತದೆ.

ಈ ಯೋಜನೆಯಿಂದ  ಘಾಟ್‌ಗಳು ಮತ್ತು ದೇವಾಲಯದ ನಡುವೆ ಯಾತ್ರಾರ್ಥಿಗಳು ಮತ್ತು ಭಕ್ತರ ಸುಗಮ ಸಂಚಾರದ ಗುರಿಯನ್ನು ಹೊಂದಿದೆ.  ಮೊದಲನೇ ಹಂತದಲ್ಲಿ  ಈ ಯೋಜನೆಯು 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಹರಡಿದೆ ಮತ್ತು 23 ಕಟ್ಟಡಗಳನ್ನು ಒಳಗೊಂಡಿದೆ. ಇಲ್ಲಿ 40 ಕ್ಕೂ ಹೆಚ್ಚು ಮರೆಯಾದ  ದೇವಾಲಯಗಳನ್ನು ಮರುಶೋಧಿಸಲಾಗಿದೆ. ಈ  ದೇವಾಲಯಗಳಿಗೆ ಶತಮಾನಗಳ ಹಿಂದಿನ ಇತಿಹಾಸವಿದೆ.

ಕಾರಿಡಾರ್‌ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪುಣ್ಯಭೂಮಿ ಕಾಶಿಯು ಅಹಿಂಸೆಯ ಸಂಕೇತ ಎಂದ ಅವರು ದೇಶಕ್ಕಾಗಿ  ಸ್ವಚ್ಛತೆ, ಸೃಜನಶೀಲನೆ ಮತ್ತು ಆತ್ಮ ನಿರ್ಭರ ಭಾರತದ ಸಂಕಲ್ಪ ಇಂದು ಅಗತ್ಯವಿದೆ ಎಂದು ಹೇಳಿದರು.

ಸಂಜೆ ಪ್ರಧಾನಿಗಳ ಉಪಸ್ಥಿತಿಯಲ್ಲಿ ಗಂಗಾರತಿ ನಡೆಯಿತು. ಇಲ್ಲಿ ನಡೆಯುವ ಗಂಗಾರತಿಗೆ ಬಹಳಷ್ಟು ಮಹತ್ವ ಇದೆ.  ಗಂಗಾ ಆರತಿ ಭಾರತದಲ್ಲಿ ಹರಿದ್ವಾರ , ಋಷಿಕೇಶ್ ಮತ್ತು ವಾರಣಾಸಿಯ ಮೂರು ಪವಿತ್ರ ನಗರಗಳಲ್ಲಿ ನಡೆಸುವುದು  ಹೆಚ್ಚು ಶ್ರೇಷ್ಟ. ಇದು ಅತ್ಯಂತ ಶಕ್ತಿಶಾಲಿ ಮತ್ತು ಉನ್ನತಿಗೇರಿಸುವ ಆಧ್ಯಾತ್ಮಿಕ ಆಚರಣೆಯಾಗಿದೆ ಎನ್ನುವುದು  ನಂಬಿಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror