MIRROR FOCUS

ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ | ಗಂಗೆಯಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಗಂಗಾರತಿಯ ವೈಭವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಸುಮಾರು  5,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುವ  ಪ್ರಧಾನಮಂತ್ರಿಯವರ ಕನಸಿನ ಯೋಜನೆ ಇದಾಗಿದೆ. ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯ  ಮತ್ತು ಗಂಗಾ ನದಿಯ ಉದ್ದಕ್ಕೂ ಇರುವ ಘಾಟ್‌ಗಳನ್ನು ಈ ಯೋಜನೆ ಸಂಪರ್ಕಿಸುತ್ತದೆ.

Advertisement

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭದಲ್ಲಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿ ರುದ್ರಾಕ್ಷಿ ಹಿಡಿದು  ಜಪ  ಮಾಡಿ ಸೂರ್ಯದೇವನಿಗೆ ಅರ್ಘ್ಯ ಸಮರ್ಪಿಸಿದರು. ನಂತರ ವಾರಣಾಸಿಯ ಕಾಲಭೈರವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕಾಲಭೈರವನಿಗೆ ಆರತಿ ಬೆಳಗಿದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕ್ಷೀರಾಭಿಷೇಕ ಮಾಡಿ ಮಹಾಮಂಗಳಾರತಿ ಬೆಳಗಿದರು. ಸಂಜೆ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement

ದೇಶದ ಪುಣ್ಯಕ್ಷೇತ್ರ ಕಾಶಿ ವಿಶ್ವನಾಥ ಮಂದಿರಕ್ಕೆ ಕಾಯಕಲ್ಪ ನೀಡಬೇಕು ಎಂಬ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾಗಿತ್ತು. ಆಧ್ಯಾತ್ಮಿಕ ಕೇಂದ್ರದ ಕಳೆದುಹೋದ ವೈಭವವನ್ನು ಮರುಸ್ಥಾಪಿಸುವ ಉದ್ದೇಶದಿಂದ 2019 ರ ಮಾರ್ಚ್‌ನಲ್ಲಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ  ಈ ಯೋಜನೆಯನ್ನು ಪ್ರಾರಂಭಿಸಿದರು. ಹೀಗಾಗಿ ಸುಮಾರು 339 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ರೂಪಿಸಿದ್ದರು. ಒಟ್ಟು 800 ಕೋಟಿ ವೆಚ್ಚದ ಈ ಯೋಜನೆಯು ಪುರಾತನ ದೇವಾಲಯವನ್ನು ಗಂಗಾನದಿಯ ದಡಕ್ಕೆ ಸಂಪರ್ಕಿಸುತ್ತದೆ.

Advertisement

ಈ ಯೋಜನೆಯಿಂದ  ಘಾಟ್‌ಗಳು ಮತ್ತು ದೇವಾಲಯದ ನಡುವೆ ಯಾತ್ರಾರ್ಥಿಗಳು ಮತ್ತು ಭಕ್ತರ ಸುಗಮ ಸಂಚಾರದ ಗುರಿಯನ್ನು ಹೊಂದಿದೆ.  ಮೊದಲನೇ ಹಂತದಲ್ಲಿ  ಈ ಯೋಜನೆಯು 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಹರಡಿದೆ ಮತ್ತು 23 ಕಟ್ಟಡಗಳನ್ನು ಒಳಗೊಂಡಿದೆ. ಇಲ್ಲಿ 40 ಕ್ಕೂ ಹೆಚ್ಚು ಮರೆಯಾದ  ದೇವಾಲಯಗಳನ್ನು ಮರುಶೋಧಿಸಲಾಗಿದೆ. ಈ  ದೇವಾಲಯಗಳಿಗೆ ಶತಮಾನಗಳ ಹಿಂದಿನ ಇತಿಹಾಸವಿದೆ.

ಕಾರಿಡಾರ್‌ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪುಣ್ಯಭೂಮಿ ಕಾಶಿಯು ಅಹಿಂಸೆಯ ಸಂಕೇತ ಎಂದ ಅವರು ದೇಶಕ್ಕಾಗಿ  ಸ್ವಚ್ಛತೆ, ಸೃಜನಶೀಲನೆ ಮತ್ತು ಆತ್ಮ ನಿರ್ಭರ ಭಾರತದ ಸಂಕಲ್ಪ ಇಂದು ಅಗತ್ಯವಿದೆ ಎಂದು ಹೇಳಿದರು.

Advertisement

ಸಂಜೆ ಪ್ರಧಾನಿಗಳ ಉಪಸ್ಥಿತಿಯಲ್ಲಿ ಗಂಗಾರತಿ ನಡೆಯಿತು. ಇಲ್ಲಿ ನಡೆಯುವ ಗಂಗಾರತಿಗೆ ಬಹಳಷ್ಟು ಮಹತ್ವ ಇದೆ.  ಗಂಗಾ ಆರತಿ ಭಾರತದಲ್ಲಿ ಹರಿದ್ವಾರ , ಋಷಿಕೇಶ್ ಮತ್ತು ವಾರಣಾಸಿಯ ಮೂರು ಪವಿತ್ರ ನಗರಗಳಲ್ಲಿ ನಡೆಸುವುದು  ಹೆಚ್ಚು ಶ್ರೇಷ್ಟ. ಇದು ಅತ್ಯಂತ ಶಕ್ತಿಶಾಲಿ ಮತ್ತು ಉನ್ನತಿಗೇರಿಸುವ ಆಧ್ಯಾತ್ಮಿಕ ಆಚರಣೆಯಾಗಿದೆ ಎನ್ನುವುದು  ನಂಬಿಕೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

8 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

16 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

16 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

16 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

16 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago