Advertisement
MIRROR FOCUS

ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ | ಗಂಗೆಯಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಗಂಗಾರತಿಯ ವೈಭವ |

Share

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಸುಮಾರು  5,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುವ  ಪ್ರಧಾನಮಂತ್ರಿಯವರ ಕನಸಿನ ಯೋಜನೆ ಇದಾಗಿದೆ. ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯ  ಮತ್ತು ಗಂಗಾ ನದಿಯ ಉದ್ದಕ್ಕೂ ಇರುವ ಘಾಟ್‌ಗಳನ್ನು ಈ ಯೋಜನೆ ಸಂಪರ್ಕಿಸುತ್ತದೆ.

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭದಲ್ಲಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿ ರುದ್ರಾಕ್ಷಿ ಹಿಡಿದು  ಜಪ  ಮಾಡಿ ಸೂರ್ಯದೇವನಿಗೆ ಅರ್ಘ್ಯ ಸಮರ್ಪಿಸಿದರು. ನಂತರ ವಾರಣಾಸಿಯ ಕಾಲಭೈರವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕಾಲಭೈರವನಿಗೆ ಆರತಿ ಬೆಳಗಿದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕ್ಷೀರಾಭಿಷೇಕ ಮಾಡಿ ಮಹಾಮಂಗಳಾರತಿ ಬೆಳಗಿದರು. ಸಂಜೆ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ದೇಶದ ಪುಣ್ಯಕ್ಷೇತ್ರ ಕಾಶಿ ವಿಶ್ವನಾಥ ಮಂದಿರಕ್ಕೆ ಕಾಯಕಲ್ಪ ನೀಡಬೇಕು ಎಂಬ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾಗಿತ್ತು. ಆಧ್ಯಾತ್ಮಿಕ ಕೇಂದ್ರದ ಕಳೆದುಹೋದ ವೈಭವವನ್ನು ಮರುಸ್ಥಾಪಿಸುವ ಉದ್ದೇಶದಿಂದ 2019 ರ ಮಾರ್ಚ್‌ನಲ್ಲಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ  ಈ ಯೋಜನೆಯನ್ನು ಪ್ರಾರಂಭಿಸಿದರು. ಹೀಗಾಗಿ ಸುಮಾರು 339 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ರೂಪಿಸಿದ್ದರು. ಒಟ್ಟು 800 ಕೋಟಿ ವೆಚ್ಚದ ಈ ಯೋಜನೆಯು ಪುರಾತನ ದೇವಾಲಯವನ್ನು ಗಂಗಾನದಿಯ ದಡಕ್ಕೆ ಸಂಪರ್ಕಿಸುತ್ತದೆ.

ಈ ಯೋಜನೆಯಿಂದ  ಘಾಟ್‌ಗಳು ಮತ್ತು ದೇವಾಲಯದ ನಡುವೆ ಯಾತ್ರಾರ್ಥಿಗಳು ಮತ್ತು ಭಕ್ತರ ಸುಗಮ ಸಂಚಾರದ ಗುರಿಯನ್ನು ಹೊಂದಿದೆ.  ಮೊದಲನೇ ಹಂತದಲ್ಲಿ  ಈ ಯೋಜನೆಯು 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಹರಡಿದೆ ಮತ್ತು 23 ಕಟ್ಟಡಗಳನ್ನು ಒಳಗೊಂಡಿದೆ. ಇಲ್ಲಿ 40 ಕ್ಕೂ ಹೆಚ್ಚು ಮರೆಯಾದ  ದೇವಾಲಯಗಳನ್ನು ಮರುಶೋಧಿಸಲಾಗಿದೆ. ಈ  ದೇವಾಲಯಗಳಿಗೆ ಶತಮಾನಗಳ ಹಿಂದಿನ ಇತಿಹಾಸವಿದೆ.

ಕಾರಿಡಾರ್‌ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪುಣ್ಯಭೂಮಿ ಕಾಶಿಯು ಅಹಿಂಸೆಯ ಸಂಕೇತ ಎಂದ ಅವರು ದೇಶಕ್ಕಾಗಿ  ಸ್ವಚ್ಛತೆ, ಸೃಜನಶೀಲನೆ ಮತ್ತು ಆತ್ಮ ನಿರ್ಭರ ಭಾರತದ ಸಂಕಲ್ಪ ಇಂದು ಅಗತ್ಯವಿದೆ ಎಂದು ಹೇಳಿದರು.

ಸಂಜೆ ಪ್ರಧಾನಿಗಳ ಉಪಸ್ಥಿತಿಯಲ್ಲಿ ಗಂಗಾರತಿ ನಡೆಯಿತು. ಇಲ್ಲಿ ನಡೆಯುವ ಗಂಗಾರತಿಗೆ ಬಹಳಷ್ಟು ಮಹತ್ವ ಇದೆ.  ಗಂಗಾ ಆರತಿ ಭಾರತದಲ್ಲಿ ಹರಿದ್ವಾರ , ಋಷಿಕೇಶ್ ಮತ್ತು ವಾರಣಾಸಿಯ ಮೂರು ಪವಿತ್ರ ನಗರಗಳಲ್ಲಿ ನಡೆಸುವುದು  ಹೆಚ್ಚು ಶ್ರೇಷ್ಟ. ಇದು ಅತ್ಯಂತ ಶಕ್ತಿಶಾಲಿ ಮತ್ತು ಉನ್ನತಿಗೇರಿಸುವ ಆಧ್ಯಾತ್ಮಿಕ ಆಚರಣೆಯಾಗಿದೆ ಎನ್ನುವುದು  ನಂಬಿಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

10 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago