ಕಾಶಿ ವಿಶ್ವನಾಥ ದೇಗುಲದ ಕಾರ್ಮಿಕರಿಗಾಗಿ 100 ಜೊತೆ ಸೆಣಬಿನ ಪಾದರಕ್ಷೆಯನ್ನು ನೀಡಿದ ಪ್ರಧಾನಿ ಮೋದಿ

January 10, 2022
11:13 PM

ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.

ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.

ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror