ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…
ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…
ಈಗಿನಂತೆ ಜುಲೈ 25ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.