ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…