ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…