ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…