ಇರಾನ್ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…