ನ.9: ಕಸ್ತೂರಿ ರಂಗನ್ ಬಾದಿತ ಸುಳ್ಯ ಗ್ರಾಮಗಳಲ್ಲಿ ಸರಕಾರಕ್ಕೆ ಮನವಿ ಸಲ್ಲಿಕೆ

October 30, 2020
3:18 PM

ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ‌.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.

Advertisement
Advertisement

ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ‌ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ
ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !
June 24, 2025
10:26 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group