ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.
ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…