ಸುದ್ದಿಗಳು

ನ.9: ಕಸ್ತೂರಿ ರಂಗನ್ ಬಾದಿತ ಸುಳ್ಯ ಗ್ರಾಮಗಳಲ್ಲಿ ಸರಕಾರಕ್ಕೆ ಮನವಿ ಸಲ್ಲಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ‌.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.

Advertisement

ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ‌ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

1 hour ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

7 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

7 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

17 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

18 hours ago