ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.
ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…